ಮಂಗಳೂರು: ಕೊರೋನಾ ನಿರ್ವಹಣೆಗೆ ಹಾಗೂ ಲಾಕ್ಡೌನ್ ಯಶಸ್ವಿಗೆ ತಾಲೂಕು ಪಂಚಾಯತ್ಗಳು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸೂಚಿಸಿದ್ದಾರೆ.
ಅವರು ಗುರುವಾರ ಜಿಲ್ಲಾ ಪಂಚಾಯತ್ನಲ್ಲಿ ವೀಡಿಯೋ ಕಾನ್ಫೆರೆನ್ಸ್ ಮೂಲಕ ಜಿಲ್ಲೆಯ ತಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.
ಸ್ಥಳೀಯಾಡಳಿತ ಸಂಸ್ಥೆಗಳು ಕರೋನಾ ನಿರ್ವಹಣೆಗೆ ಸಮರೋಪಾದಿಯಲ್ಲಿತೊಡಗಬೇಕು. ಗ್ರಾಮ ಪಂಚಾಯತ್ಗಳು ಜನರ ಮಧ್ಯೆಇರುವುದರಿಂದಅಲ್ಲಿನಶಂಕಿತ ರೋಗಿಗಳ ಹಾಗೂ ಕರೋನಾ ಪೀಡಿತರ ಜನರ ಎಲ್ಲಾ ಮಾಹಿತಿ ಇದ್ದು, ಜಾಗೃತಾವಸ್ಥೆಯಲ್ಲಿ ಕೆಲಸ ಮಾಡಿದರೆ, ಕೊರೋನಾ ನಿಯಂತ್ರಣ ಸಾಧ್ಯ. ಈ ಹಿನ್ನೆಲೆಯಲ್ಲಿ ತಾ.ಪಂ. ಹಾಗೂ ಗ್ರಾ.ಪಂ. ಪ್ರತಿನಿಧಿಗಳು ಶ್ರಮ ವಹಿಸಿ ದುಡಿಯಬೇಕು ಎಂದು ಸಚಿವರು ತಿಳಿಸಿದರು.
ಈ ಸಂದರ್ಭದಲ್ಲಿ ಚರ್ಚೆಯ ನಂತರ 14ನೇ ಹಣಕಾಸಿನ ಅನುದಾನದಲ್ಲಿ ಕೊರೋನಾ ನಿಯಂತ್ರಣಕ್ಕೆ ಬೇಕಾದ ಯೋಜನೆ ರೂಪಿಸಲು ಸರಕಾರದ ಅನುಮತಿ ಸೇರಿದಂತೆ, ಕರೋನಾ ಜಾಗೃತಿಗೆ ಪ್ರತೀ ಗ್ರಾ.ಪಂ.ಗೆ ರೂ. 20 ಸಾವಿರದಂತೆ ಅನುದಾನ ನೀಡಲಾಗಿದೆ. ಇದನ್ನು ಯಾವ ರೀತಿ ಖರ್ಚು ಮಾಡಬಹುದು ಎಂಬುದರ ಸಮಗ್ರ ಮಾಹಿತಿ ಪಡೆದ ಸಚಿವರು, ಕೊರೋನಾ ನಿಯಂತ್ರಣಕ್ಕೆಎಲ್ಲರೂ ತಂಡವಾಗಿ ಕೆಲಸ ಮಾಡಬೇಕಿದೆ ಎಂದರು.
ಇದಲ್ಲದೆ, ಮುಂಬರುವ ಮಳೆಗಾಲದಲ್ಲಿ ಬರಬಹುದಾದ, ಡೆಂಗ್ಯು ,ಮಲೇರಿಯಾ, ಇಲಿಜ್ವರ ಮತ್ತಿತರ ಕಾಯಿಲೆಗಳ ಬಗ್ಗೆ ಜಾಗೃತರಾಗಬೇಕು ಎಂದು ಸಚಿªವ ಕೋಟ ಸೂಚಿಸಿದರು.
ಸುಳ್ಯ, ಮಂಗಳೂರು, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು, ಕಾರ್ಯನಿರ್ವಹಣಾಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದು, ತಮ್ಮ ತಾಲೂಕುಗಳಲ್ಲಿ ನಡೆಯುತ್ತಿರುವ ಕೊರೋನಾ ಕಾರ್ಯಕ್ರಮಗಳ ಮಾಹಿತಿ ನೀಡಿದರು.
ಅಪಾರ್ಟ್ಮೆಂಟ್ಗಳ ಮೂಲಸೌಕರ್ಯ ಸಮೀಕ್ಷೆಗೆ ಸೂಚನೆ:
ಜಿಲ್ಲೆಯಾದ್ಯಂತಇರುವಎಲ್ಲಾ ವಸತಿ ಸಮುಚ್ಛಯಗಳ ಕೊಳಚೆ ನೀರು ತೆರೆದ ಚರಂಡಿಯಲ್ಲೇ ಹರಿದು ಸ್ಥಳಿಯರ ಬಾವಿ ಹಾಳಾಗಿದ್ದು, ರೋಗಗಳು ಬರುವ ಅಪಾಯ ಇದೆ. ಈ ಹಿನ್ನೆಲೆಯಲ್ಲಿ ತಕ್ಷಣ ಸಮೀಕ್ಷೆ ನಡೆಸಿ, ಜಿಲ್ಲೆಯಾದ್ಯಂತ ಇರುವ ವಸತಿ ಸಮುಚ್ಛಯಗಳ ಮೂಲಭೂತ ಸಮೀಕ್ಷೆಗಳ ಹೇಗೆ ಇದೆ ಎಂಬುದರ ಬಗ್ಗೆ ವರದಿ ನೀಡಲು ಸಚಿವರು ನಿರ್ದೇಶಿಸಿದರು.
ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲು, ಜಿ.ಪಂ. ಅಧ್ಯಕ್ಷ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ ಮತ್ತಿತರರು ಉಪಸ್ಥಿತರಿದ್ದರು.
(ಉಪಯುಕ್ತ ನ್ಯೂಸ್)
ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಟ್ವಿಟರ್ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ
ಯೂಟ್ಯೂಬ್ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ