ಮಂಗಳೂರು: ರಾಜ್ಯದಲ್ಲಿ ಮಂಗಳವಾರ 42 ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 904ಕ್ಕೆ ತಲುಪಿದೆ. ಒಟ್ಟು 31 ಮಂದಿ ಮೃತಪಟ್ಟಿದ್ದಾರೆ.
ಬಾಗಲಕೋಟೆ 15, ಧಾರವಾಡ-9, ಬೀದರ್ 2, ಕಲಬುರ್ಗಿ 1, ಬೆಂಗಳೂರು ನಗರ- 3, ದ.ಕ.- 2, ಬಳ್ಳಾರಿ -1, ಚಿಕ್ಕಬಳ್ಳಾಪುರ-1, ಯಾದಗಿರಿ-2, ಮಂಡ್ಯ 1, ಹಾಸನ -5 ಪ್ರಕರಣ ದಾಖಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಹೊಸ ಪ್ರಕರಣ ದಾಖಲಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. ಸೋಮವಾರ ಬಂಟ್ವಾಳದ ಒಬ್ಬರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ ಒಟ್ಟು 14 ಮಂದಿ ಗುಣಮುಖರಾಗಿದ್ದಾರೆ. 17 ಮಂದಿ ಚಿಕಿತ್ಸೆಯಲ್ಲಿದ್ದು, ಮೂವರು ಮೃತಪಟ್ಟಿದ್ದಾರೆ.
(ಉಪಯುಕ್ತ ನ್ಯೂಸ್)
ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಟ್ವಿಟರ್ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ
ಯೂಟ್ಯೂಬ್ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ