ಮೈಸೂರು: ನಾಡಹಬ್ಬ ದಸರಾ ಹಬ್ಬದ ಹಿನ್ನೆಲೆಯಲ್ಲಿ ಮೈಸೂರು ಸುತ್ತಮುತ್ತಲಿನ ಪ್ರವಾಸಿ ತಾಣಗಳಿಗೆ ವಿಧಿಸಿದ್ದ ನಿರ್ಬಂಧವನ್ನು ಇದೀಗ ತೆರವುಗೊಳಿಸಲಾಗಿದೆ.
ಕೋವಿಡ್ ನಿಯಂತ್ರಣಕ್ಕೆ ತರಲು ಜನರು ಹೆಚ್ಚು ಸೇರದಂತೆ ನೋಡಿಕೊಳ್ಳುವ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪ್ರವಾಸಿ ತಾಣಗಳಿಗೆ ಸೀಮಿತ ಅವಧಿಗೆ ಅನ್ವಯವಾಗುವಂತೆ ಸಾರ್ವಜನಿಕ ಪ್ರವಾಸಿ ನಿರ್ಬಂಧಿಸಿ ಆದೇಶಿಸಿದ್ದರು.
ಈ ಕಾರಣಕ್ಕಾಗಿ ಹೋಟೆಲ್ ಮಾಲೀಕರ ಸಂಘ, ಪ್ರವಾಸಿ ವಾಹನ ಚಾಲಕರು ಮತ್ತು ಮಾಲುಕರ ಸಂಘ, ಮೈಸೂರು ಟ್ರಾವೆಲ್ಸ್ ಅಸೋಸಿಯೇಷನ್ ತೀವ್ರ ವಿರೋಧ ವ್ಯಕ್ತಪಡಿಸಿದರು. ಆದ್ದರಿಂದ ನಿರ್ಬಂಧ ತೆರವುಗೊಳಿಸುವಂತೆ ಮನವಿ ಮಾಡಿಕೊಂಡಿತ್ತು. ಈ ಹಿನ್ನೆಲೆಯಿಂದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ.
ಹಾಗೆಯೇ ಶುಕ್ರವಾರ ಸಿಎಂ ಯಡಿಯೂರಪ್ಪ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್’ಟಿ ಸೋಮಶೇಖರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ವನ್ನು ಕೈಗೊಳ್ಳಲಾಗಿದೆ.
ಮೈಸೂರು ನಗರದ ಅರಮನೆ ಹಾಗೂ ಮೃಗಾಲಯ, ಚಾಮುಂಡಿಬೆಟ್ಟ ಮತ್ತು ನಂಜನಗೂಡು ದೇವಾಲಯಕ್ಕೆ ಪ್ರವಾಸಿ ನಿರ್ಬಂಧ ವಿಧಿಸಲಾಗಿತ್ತು.
ಇದರ ಜೊತೆಯಲ್ಲಿಯೇ ಮಂಡ್ಯ ಜಿಲ್ಲಾಡಳಿತದ ಮೂಲಕ ಕೆಆರ್’ಎಸ್ ಮತ್ತು ರಂಗನತಿಟ್ಟು ಪ್ರವಾಸಿ ತಾಣಕ್ಕೂ ನಿರ್ಬಂಧ ವಿಧಿಸಲಾಗಿತ್ತು. ಆದರೆ, ಇದೀಗ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ನಿರ್ಬಂಧ ತೆರವುಗೊಳಿಸಲಾಗಿದೆ.