ಜೈಪುರ: ಜೈಪುರ ಪ್ರವಾಸದಲ್ಲಿರುವ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಸುದ್ದಿಗಾರರರೊಂದಿಗೆ ಮಾತನಾಡಿದ್ದು, ತಾವು ಜಾತ್ಯತೀತ ವ್ಯಕ್ತಿಯಾಗಿದ್ದು, ರಾಮ ಮಂದಿರಕ್ಕೆ ದೇಣಿಗೆ ನೀಡುವುದಾಗಿ ಹೇಳಿದ್ದಾರೆ.
ಸುದ್ದಿಗಾರರು ಕೇಳಿರುವ ಪ್ರಶ್ನೆಗೆ ಉತ್ತರ ನೀಡಿರುವ ಅವರು, ಕೋವಿಡ್-19 ಮಹಾಮಾರಿ ಬಳಿಕ ಇದು ತಮ್ಮ ಮೊದಲ ಧಾರ್ಮಿಕ ಪ್ರವಾಸವಾಗಿದ್ದು, ಮಸೀದಿ ಅಥವಾ ಚರ್ಚ್ ಆಗಿರಲಿ, ಇತರ ಧಾರ್ಮಿಕ ಸ್ಥಳಗಳಲ್ಲಿಯೂ ನಾನು ಪ್ರಾರ್ಥನೆ ಸಲ್ಲಿಸುತ್ತೇನೆ. ನಾನು ಜಾತ್ಯತೀತ ವ್ಯಕ್ತಿಯಾಗಿದ್ದೇನೆ ಮತ್ತು ದೇಶದ ಜನರು ಶಾಂತಿಯಿಂದ ವಾಸಿಸಬೇಕೆಂದು ಬಯಸುತ್ತೇನೆ ಎಂದಿದ್ದಾರೆ.