ಮಂಗಳೂರು: ಕಾವೂರು, ಕುಂಜತ್ತಬೈಲ್, ಪಂಜಿಮೊಗರು ಗ್ರಾಮದ ಫಲಾನುಭವಿಗಳಿಗೆ ಸರಕಾರದಿಂದ ಸಿಗುವ ವಿವಿಧ ಸೌಲಭ್ಯಗಳನ್ನು ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಮಂಗಳವಾರ ವಿತರಿಸಿದರು.
ಕಾವೂರು ಸೊಸೈಟಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 38 ಜನರಿಗೆ ಹಕ್ಕುಪತ್ರ, 28 ಜನರಿಗೆ ಸಂಧ್ಯಾ ಸುರಕ್ಷಾ, 22 ವಿಧವಾ ವೇತನ ಹಾಗೂ 6 ವೃದ್ಧಾಪ್ಯ ವೇತನ ಮತ್ತು 4 ಅಂಗವಿಕಲ ವೇತನವನ್ನು ಶಾಸಕರು ವಿತರಿಸಿದರು.
ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶರತ್ ಕುಮಾರ್, ಮನಪಾ ಸದಸ್ಯೆಯರಾದ ಸುಮಂಗಲಾ ರಾವ್, ಗಾಯತ್ರಿ ರಾವ್, ಜಿಲ್ಲಾ ಮಾಧ್ಯಮ ಪ್ರಮುಖ್ ರಣದೀಪ್ ಕಾಂಚನ್, ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಶೀತೇಶ್ ಕೊಂಡೆ, ಕಂದಾಯ ಅಧಿಕಾರಿ ನವೀನ್ ಹಾಗೂ ಫಲಾನುಭವಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ಉಪಯುಕ್ತ ನ್ಯೂಸ್ ಸಿಗ್ನಲ್ ಗ್ರೂಪಿಗೆ ಜಾಯಿನ್ ಆಗಲು ಈ ಲಿಂಕ್ ಬಳಸಿ