ಹೊಸದಿಲ್ಲಿ: ಕ್ರಿಕೆಟ್ ಪ್ರಿಯರ ಪಾಲಿಗೆ ಆಗಸ್ಟ್ 15 ಅಂದರೆ ನಿನ್ನೆಯ ದಿನ ನಿಜಕ್ಕೂ ಶಾಕ್ ಆಗಿದೆ. ಟೀಮ್ ಇಂಡಿಯಾವನ್ನು ಮುನ್ನಡೆಸಿ ಎರಡು ವಿಶ್ವಕಪ್ಗಳನ್ನು ಗೆಲ್ಲಿಸಿಕೊಟ್ಟಿದ್ದ ಮಾಜಿ ನಾಯಕ ಎಂಎಸ್ ಧೋನಿ ನಿನ್ನೆ ಅಂತಾರಾಷ್ಟ್ರೀಯ ನಿವೃತ್ತಿ ಘೋಷಿಸಿದ್ದಾರೆ.
ಅದರ ಜೊತೆಯಲ್ಲಿ ಮತ್ತೋರ್ವ ಭಾರತದ ಅನುಭವಿ ಬ್ಯಾಟ್ಸ್ಮನ್ ಸುರೇಶ್ ರೈನಾ ಕೂಡ ಆಟ ನಿಲ್ಲಿಸುವ ನಿರ್ಧಾರ ಪ್ರಕಟಿಸಿದ್ದಾರೆ. ಎಲ್ಲಾ ಮಾದರಿಯ ಕ್ರಿಕೆಟ್ಗೆ ರೈನಾ ನಿವೃತ್ತಿ ಘೋಷಿಸಿದ್ದಾರೆ.
ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಸೆಪ್ಟೆಂಬರ್ 19ರಿಂದ ಭಾರತದ ಅದ್ದೂರಿ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಗೊಳ್ಳುವುದರಲ್ಲಿದೆ. ಅದಕ್ಕೆ ಮೊದಲು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಧೋನಿ ಮತ್ತು ಸುರೇಶ್ ರೈನಾ ಶಾಕ್ ನೀಡಿದ್ದಾರೆ.
ಎಂಎಸ್ ಧೋನಿ ಇನ್ಸ್ಟಾಗ್ರಾಮ್ನಲ್ಲಿ ನಿವೃತ್ತಿ ನಿರ್ಧಾರ ಪ್ರಕಟಿಸಿದ್ದರು. ‘ನನ್ನನ್ನು ಪ್ರೀತಿಸಿದ್ದಕ್ಕಾಗಿ, ಬೆಂಬಲಿಸಿದಕ್ಕಾಗಿ ಅನಂತ ಧನ್ಯವಾದಗಳು. 1929 ಗಂಟೆಗಳಿಂದ ನಾನು ನಿವೃತ್ತಿಯಾಗಿದ್ದೇನೆಂದು ಪರಿಗಣಿಸಿ,’ ಎಂದು ಧೋನಿ ಬರೆದುಕೊಂಡಿದ್ದರು. ಸುರೇಶ್ ರೈನಾ ಕೂಡ ಇನ್ಸ್ಟಾಗ್ರಾಮ್ನಲ್ಲೇ ನಿವೃತ್ತಿಯ ನಿರ್ಧಾರ ಹೇಳಿಕೊಂಡಿದ್ದಾರೆ.
‘ನಿನ್ನೊಂದಿಗೆ ಆಡುವುದಲ್ಲದೆ ಪ್ರೀತಿಸುವ ವಿಚಾರ ಬೇರೇನಿಲ್ಲ ಮಾಹಿ. ನನ್ನ ಹೃದಯ ಹೆಮ್ಮೆಯಿಂದ ತುಂಬಿದೆ. ನಿಮ್ಮ ಪಯಣವನ್ನೇ ಸೇರಿಕೊಳ್ಳಲು ಬಯಸಿದ್ದೇನೆ. ಥ್ಯಾಂಕ್ಯೂ ಇಂಡಿಯಾ. ಜೈ ಹಿಂದ್ ಎಂದು ರೈನಾ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್ App ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಟ್ವಿಟರ್ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ
ಯೂಟ್ಯೂಬ್ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್ App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.