ಮಂಗಳೂರು:- ಕರ್ನಾಟಕ ರಾಜ್ಯ ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ, ಮಂಗಳೂರು ವಿಭಾಗದಿಂದ ಸುಳ್ಯ ತಾಲೂಕಿನ ಎಲೆಮಲೆ-ಅರಂತೋಡು ರಸ್ತೆಯ 3.60 ಕಿ.ಮೀ (ಸೇವಾಜೆ) ನ ಹಳೆಯ ಸೇತುವೆಯನ್ನು ಕೆಡವಿ ಅದೇ ಸ್ಥಳದಲ್ಲಿ 10 ಮೀಟರ್ ಅಗಲಕ್ಕೆ ಹೊಸ ಸೇತುವೆ ನಿರ್ಮಿಸಬೇಕಾಗಿರುವುದರಿಂದ ಫೆಬ್ರವರಿ 15 ರಿಂದ ಜೂನ್ 30 ರವರೆಗೆ ಈ ರಸ್ತೆಯಲ್ಲಿ ಘನ ವಾಹನಗಳ ಸಂಚಾರವವನ್ನು ನಿಷೇಧಿಸಲಾಗಿದೆ.
ಸಾರ್ವಜನಿಕರು ಬದಲಿ ರಸ್ತೆಯಾಗಿ ಅರಂತೋಡು ಮಾರ್ಗದಿಂದ ಎಲೆಮಲೆಗೆ ಸಂಚರಿಸುವ ವಾಹನಗಳು ಸುಳ್ಯ-ಪೈಚಾರು-ಸೋಂಣಂಗೇರಿ-ದೊಡ್ಡತೋಟ ಮೂಲಕ ಹಾಗೂ ಎಲೆಮಲೆ ಮಾರ್ಗದಿಂದ ಅರಂತೋಡಿಗೆ ಸಂಚರಿಸುವ ವಾಹನಗಳು ದೊಡ್ಡತೋಟ-ಸೋಣಂಗೇರಿ-ಪೈಚಾರು ಮೂಲಕ ಅರಂತೋಡಿಗೆ ಸಂಚರಿಸಬಹುದು ಎಂದು ಮಂಗಳೂರು ವಿಭಾಗದ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ಉಪಯುಕ್ತ ನ್ಯೂಸ್ ಸಿಗ್ನಲ್ ಗ್ರೂಪಿಗೆ ಜಾಯಿನ್ ಆಗಲು ಈ ಲಿಂಕ್ ಬಳಸಿ