ಉಡುಪಿ: ಕಾಪು ತಾಲೂಕು ಕುಂಜೂರಿನ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಮಾರ್ಚ್ 1ರಂದು ತ್ರಿಕಾಲ ಪೂಜೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ.
ದಿನದ ತ್ರಿಸಂಧ್ಯಾ ಕಾಲಗಳಲ್ಲಿ ಶ್ರೀ ದುರ್ಗಾ ಮಾತೆಗೆ ವಿಸ್ತೃತ ವಿಧಿ-ವಿಧಾನ, ಅರ್ಚನೆ-ಪಾರಾಯಣ, ವಿಶೇಷ ಸಮರ್ಪಣೆ, ಬಾಗಿನದಾನ-ಕನ್ನಿಕಾ ಪೂಜೆ, ಅನ್ನಸಂತರ್ಪಣೆ ಮುಂತಾದ ವಿವಿಧ ಉಪಾಸನಾ ಅನುಷ್ಠಾನಗಳೊಂದಿಗೆ ನಡೆಸುವ ಆರಾಧನೆಯೇ ತ್ರಿಕಾಲ ಪೂಜೆ.
ಶ್ರೀ ದುರ್ಗಾ ಸೇವಾ ಸಮಿತಿ ಅಧ್ಯಕ್ಷರಾದ ಕೆ. ಎಲ್ ಕುಂಡಂತಾಯ ಅವರು ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದು, ಭಕ್ತಾದಿಗಳು ಪಾಲ್ಗೊಳ್ಳುವಂತೆ ಕೋರಿದ್ದಾರೆ.
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ಉಪಯುಕ್ತ ನ್ಯೂಸ್ ಸಿಗ್ನಲ್ ಗ್ರೂಪಿಗೆ ಜಾಯಿನ್ ಆಗಲು ಈ ಲಿಂಕ್ ಬಳಸಿ